ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮತದಾನಕ್ಕೆ ಇನ್ನು 9 ದಿನಗಳು ಬಾಕಿ ಇರುವಾಗ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ರಾಜ್ಯದ 224 ಕ್ಷೇತ್ರಗಳ ತಜ್ಞರ ಅಭಿಪ್ರಾಯ ಪಡೆದುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಜನರಿಗೆ ಏನು ಒಳ್ಳೆಯದು ಮಾಡಲು ಸಾಧ್ಯವೋ ಅದನ್ನು ಬಿಜೆಪಿ ಮಾಡಲಿದೆ ಎಂದು ಜೆ.ಪಿ ನಡ್ಡಾ ಹೇಳಿದರು.
ಈ ವೇಳೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಜೋಶಿ, ಶೋಭಾ ಕರಂದ್ಲಾಜೆ, ರಾಜ್ಯ ಸಚಿವ ಆರ್.ಅಶೋಕ ಸೇರಿದಂತೆ ಸಂಸದರು, ಮುಖಂಡರು ಉಪಸ್ಥಿತರಿದ್ದರು.