ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಕದನ ಅಂತಿಮ ಹಂತಕ್ಕೆ ಬಂದಿದೆ. ಇನ್ನೇನು 6 ದಿನಗಳು ಬಾಕಿ ಉಳಿದಿವೆ. ಹೀಗಾಗಿ ರಾಜಕೀಯ ಪಕ್ಷಗಳ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಎಲ್ಲೆಡೆ ಸುತ್ತಾಡಿ ಪ್ರಚಾರ ನಡೆಸಿದ್ದಾರೆ. ಇದೀಗ ಮೇ 6ಕ್ಕೆ ಹುಬ್ಬಳ್ಳಿಗೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ನೀಡುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಗದೀಶ್ ಶೆಟ್ಟರ್ ಕ್ಷೇತ್ರದಿಂದಲೇ ಸೋನಿಯಾ ಗಾಂಧಿ ರ್ಯಾಲಿ ನಡೆಸಲಿದ್ದಾರೆ. ಈಗಾಗ್ಲೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸುರ್ಜೇವಾಲ್ ಸೇರಿ ರಾಷ್ಟ್ರೀಯ ನಾಯಕರು ಭಾರೀ ಪ್ರಚಾರ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರ ಆಗಮನ ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ತರಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ಬಿಜೆಪಿ ಪರ ಈಗಾಗ್ಲೇ ಪ್ರಧಾನಿ ಮೋದಿ, ಅಮಿತ್ ಶಾ ಬಿಟ್ಟು ಬಿಡದೆ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ನಡೆಸಿದ್ದಾರೆ. ಈಗ ಸೋನಿಯಾ ಆಗಮನ ಎರಡು ರಾಷ್ಟ್ರೀಯ ಪಕ್ಷಗಳ ನಡುವಿನ ಹೋರಾಟದ ಕಾವು ಹೆಚ್ಚಾಗಲಿದೆ.