ಪ್ರಜಾಸ್ತ್ರ ಅಪರಾಧ ಸುದ್ದಿ
ಯಾದಗಿರಿ: ಅನೈತಿಕ ಸಂಬಂಧದ ಶಂಕೆ ಹಿನ್ನಲೆಯಲ್ಲಿ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಿ ನಿಂಗಪ್ಪ ಕ್ವಾಣಿ(38) ಕೊಲೆಯಾ ಮಹಿಳೆ.
ಮಂಗಳವಾರ ರಾತ್ರಿ ಲಕ್ಷ್ಮಿ ಪತಿ ನಿಂಗಪ್ಪ ಮಲ್ಲಪ್ಪ ಕ್ವಾಣಿ(43) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಶರಣಾಗಿದ್ದಾನಂತೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.