ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಳಗಾವಿ: ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ಮಾರಿಹಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಕೊಲೆಯಾದ ಯುವಕ.
ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡಿಸಿಪಿ ಪಿ.ವಿ ಸ್ನೇಹ ಹಾಗೂ ಮಾರಿಹಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.