ಪ್ರಜಾಸ್ತ್ರ ಸುದ್ದಿ
ಹಾಸನ: ಮಧ್ಯಾಹ್ನದ ಊಟದ ಮಾಡಿದ ನಂತರ 35 ಸೈನಿಕರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕ್ಯಾಂಪ್ ನಲ್ಲಿರುವ ಭಾರತೀಯ ಚಾಲನಾ ತರಬೇತಿಯ 35 ಸೈನಿಕರು ಎಂದಿನಂತೆ ಮಧ್ಯಾಹ್ನ ಊಟ ಮಾಡಿದ್ದಾರೆ. ಕೆಲ ಹೊತ್ತಿನ ಬಳಿಕ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಅವರನ್ನು ಸಕಲೇಶಪುರದ ಗ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಸಿಮೆಂಟ್ ಮಂಜು ಆಸ್ಪತ್ರೆಗೆ ಭೇಟಿ ನೀಡಿ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ. ಈ ಘಟನೆಗೆ ಕಾರಣ ಏನು ಅನ್ನೋದು ತಿಳಿದು ಬರಬೇಕಿದೆ.