ಪ್ರಜಾಸ್ತ್ರ ಸುದ್ದಿ
ಐಜೋಲ್: ಇಲ್ಲಿಂದ ಸುಮಾರು 21 ಕಿಲೋ ಮೀಟರ್ ದೂರದಲ್ಲಿರುವ ಸಾಯಿರಂಗ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಮೇಲ್ಸೇತುವೆ ಕುಸಿದು ಬಿದ್ದ ಪರಿಣಾಮ 17 ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕೆಲಸದಲ್ಲಿ ಸುಮಾರು 40 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಬಳಿಕ ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮಿಜೋರಾಂ ಸಿಎಂ ಝೋರಮ್ ತಂಗಾ ಸಂತಾಪ ಸೂಚಿಸಿದ್ದು, ಪರಿಹಾರದ ಭರವಸೆ ನೀಡಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.