ಪ್ರಜಾಸ್ತ್ರ ಸುದ್ದಿ
ಸಿಕ್ಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಮಂಗಳವಾರ ರಾತ್ರಿಯಿಂದ ತೀವ್ರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಪ್ರವಾಹದಲ್ಲಿ 23 ಸೇನಾ ಯೋಧರು ನಾಪತ್ತೆಯಾಗಿದ್ದಾರೆ.
ಅಪಾರ ಪ್ರಮಾಣ ಆಸ್ತಿಪಾಸ್ತಿ ಹಾನಿಯಾಗಿದೆ. ನಿರಾಶ್ರಿತರನ್ನು ಸುರಕ್ಷಿತ ಸ್ಥಳಗಳಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಭಾರೀ ಮಳೆಯಿಂದಾಗಿ ತೀಸ್ತಾ ನದಿ ಉಕ್ಕಿ ಹರಿಯುತ್ತಿದೆ. ರಾಜಧಾನಿಯ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಮನೆಗಳು ಮುಳುಗುವ ಹಂತಕ್ಕೆ ಹೋಗಿವೆ.