ಪ್ರಜಾಸ್ತ್ರ ಸುದ್ದಿ
ಹಾಸನ: ಕಾಂತರಾಜ್ ಆಯೋಗದ ವರದಿ ಫೆಬ್ರವರಿ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಗುರುವಾರ ಸಲ್ಲಿಸಿದ್ದಾರೆ. ಇದಕ್ಕೆ ಆಡಳಿತ ಪಕ್ಷದ ಕೆಲ ನಾಯಕರು ಹಾಗೂ ವಿಪಕ್ಷಗಳ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಶುಕ್ರವಾರ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್ ಹೆಗಡೆ ಅವರು ಅಧ್ಯಕ್ಷರಲ್ಲವೇ? ಅವರ ಸಲ್ಲಿಸಿದ ವರದಿಯನ್ನು ಸ್ವೀಕರಿಸಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದರು. ವರದಲ್ಲಿ ಏನಿದೆ ಅನ್ನೋದು ಗೊತ್ತಿಲ್ಲ. ಈ ಕುರಿತು ಸಂಪುಟದಲ್ಲಿ ಸಂಪೂರ್ಣವಾಗಿ ಚರ್ಚೆ ಮಾಡುತ್ತೇವೆ. ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.