ನವದೆಹಲಿ: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ಸಿದ್ಧತೆ ನಡೆಸಿದೆ. ಹೀಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನ, ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗ್ತಿದೆಯಂತೆ.
ಪ್ರಿಯಾಂಕಾರ ಹೊಸ ನೇಮಕದ ಬಗ್ಗೆ ಕಾಂಗ್ರೆಸ್ ಅಧಿಕೃತವಾಗಿ ಘೋಷಣೆ ಮಾಡಲಿದೆ. ಲೋಕಸಭೆಯಲ್ಲಿ ಸೋತ ಅಭ್ಯರ್ಥಿಗಳು, ಜಿಲ್ಲಾ ಮಟ್ಟದ ನಾಯಕರುಗಳ ಜೊತೆ ಸಭೆ ನಡೆಸ್ತಿದ್ದಾರೆ. ಯುಪಿಯಲ್ಲಿ ತಳಮಟ್ಟದಿಂದ ಪಕ್ಷವನ್ನ ಸಂಘಟಿಸುವ ಜವಾಬ್ದಾರಿಯನ್ನ ಪ್ರಿಯಾಂಕಾಗೆ ನೀಡಲಾಗ್ತಿದೆ.
2022ಕ್ಕೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ತಳಮಟ್ಟದಲ್ಲಿ ಪಕ್ಷವನ್ನ ಭದ್ರವಾಗಿಸಲು ಈಗಿನಿಂದಲೇ ಸಭೆಗಳನ್ನ ಮಾಡ್ತಿದ್ದು, ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸ್ತಿದ್ದಾರೆ.