ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸುಳ್ಳು ಜಾಹೀರಾತು ಪ್ರಕರಣ ಸಂಬಂಧ ಪತಂಜಲಿಯ ಆಯುರ್ವೇದ ಕಂಪನಿಯ ಎಂ.ಡಿ ಆಚಾರ್ಯ ಬಾಲಕೃಷ್ಣ, ಬಾಬಾ ರಾಮದೇವ ಇಂದು ಸುಪ್ರೀಂ ಕೋರ್ಟ್ ಮುಂದೆ ಹಾಜರಾದರು.
ಹಲವು ಬಾರಿ ನೋಟಿಸ್ ನೀಡಿದರೂ ಉತ್ತರಿಸಿದ ಇಬ್ಬರು ಕೋರ್ಟ್ ಮುಂದೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿತ್ತು. ಅಲ್ಲದೇ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದೆ ಇರುವುದರಿಂದ ನ್ಯಾಯಾಂಗ ನಿಂದನೆ ಪ್ರಕರಣ ಯಾಕೆ ದಾಖಲಿಸಬಾರದು ಎಂದು ಕೇಳಿತ್ತು.
ಭಾರತೀಯ ವೈದ್ಯಕೀಯ ಸಂಘ ಪತಂಜಲಿ ನೀಡಿದ ಜಾಹೀರಾತು ವಿರುದ್ಧ ದೂರು ನೀಡಿದೆ. ಪತಂಜಲಿ ಉತ್ಪನ್ನಗಳ ಬಗ್ಗೆ ಜಾಹೀರಾತು ನೀಡಿ ಆರೋಗ್ಯದ ಬಗ್ಗೆ ಸುಳ್ಳು ಹಾಗೂ ತಪ್ಪು ದಾರಿಗೆಳೆಯುವ ಕೆಲಸ ಮಾಡಿದೆ ಎಂದು ದೂರು ದಾಖಲಿಸಲಾಗಿದೆ.