ಬೆಂಗಳೂರು: ಅಧಿವೇಶನಕ್ಕೆ ಮಾಧ್ಯಮಗಳ ನಿರ್ಬಂಧ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಅಂತಾ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾಧ್ಯಕ್ಷರ ಕ್ರಮವನ್ನ ಖಂಡಿಸಿರುವ ಹೆಚ್ಡಿಡಿ, ಜನವಿರೋಧಿ ಆದೇಶವನ್ನ ಹಿಂಪಡೆಯಬೇಕು ಅಂತಾ ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಪತ್ರಿಕಾ ಸ್ವಾತಂತ್ರ್ಯ ಅನಿವಾರ್ಯ. ಅದನ್ನ ನಿರ್ಬಂಧಿಸುವುದು ಸರಿಯಾದ ಕ್ರಮವಲ್ಲ ಅಂತಾ ಹೇಳಿದ ಅವರು, ಮಾಧ್ಯಮದವರು ನಡೆಸಿರುವ ಪ್ರತಿಭಟನೆಗೆ ಜೆಡಿಎಸ್ ನ ಸಂಪೂರ್ಣ ಬೆಂಬಲವಿದೆ ಅಂತಾ ಹೇಳಿದ್ದಾರೆ.