ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಮೊದಲ ಅತೃಪ್ತ ಶಾಸಕ ಎಂದು ಸಂಸದ ವಿ ಶ್ರೀನಿವಾಸ ಪ್ರಸಾದ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಮನವಿಗೆ ಸ್ಪಂದಿಸ್ತಿಲ್ಲವೆಂದು ಮೊದಲು ಅಸಮಾಧಾನ ಹೊರ ಹಾಕಿದ್ದೇ ಸಿದ್ದರಾಮಯ್ಯ ಅಂತಾ ಹೇಳಿದ್ರು.
ಕಾಡಿ, ಬೇಡಿ ವಿರೋಧ ಪಕ್ಷದ ನಾಯಕನಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಗೆದ್ದು ಇಲ್ಲದ ಆಟ ಆಡ್ತಿದ್ದಾರೆ ಅಂತಾ ಕಿಡಿ ಕಾರಿದ್ರು. ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಲೋಕಸಭಾ ಚುನಾವಣೆ ಬಳಿಕ ರಾಹುಲ ಗಾಂಧಿ ರಾಜೀನಾಮೆ ಕೊಟ್ಟು ಓಡಿ ಹೋಗಿದ್ದಾರೆ. ಯಡಿಯೂರಪ್ಪ ಆಡಿಯೋದಲ್ಲಿ ಹೇಳಿರುವುದು ಏನೂ ತಪ್ಪಿಲ್ಲ. ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು ಅಂತಾ ಹೇಳಿದ್ರು.