ಕಾರವಾರ: ಉಪ ಚುನಾವಣೆ ಪ್ರಾಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾದ ಘಟನೆ ರಾಮಾಪುರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆ. ಇದರ ಪ್ರಚಾರದ ವೇಳೆ ಎರಡು ರಾಷ್ಟ್ರೀಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ಫೈಟ್ ಆಗಿದೆ.
ರಾಮಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ ಪರ ಪ್ರಚಾರ ನಡೆದಿದೆ. ಈ ವೇಳೆ ಕಾರ್ಯಕರ್ತರು ತಂತಮ್ಮ ನಾಯಕರ ಪರವಾಗಿ ಘೋಷಣೆ ಕೂಗಿದ್ದಾರೆ. ಇದರ ನಡುವೆಯೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸ್ರು ಬಂದು ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.