ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಖಾಸಗಿ ಕಾಲೇಜೊಂದರ ಐವರು ವಿದ್ಯಾರ್ಥಿಗಳು ತನ್ನ ಸಹಪಾಠಿಯ ಮೇಲೆ ಅತ್ಯಾಚಾರ ಕೃತ್ಯವೆಸಗಿ ಇದೀಗ ಕಂಬಿ ಹಿಂದೆ ಸೇರಿದ್ದಾರೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇದೀಗ ಬೆಳಕಿಗೆ ಬರಲು ಐವರಲ್ಲಿರುವ ಒಬ್ಬ ವಿದ್ಯಾರ್ಥಿ ಕಾರಣ.
ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗಾಣದಮನೆ ನಿವಾಸಿ ಗುರುನಂದನ್, ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನೀಲ, ಬಂಟ್ವಾಳ ತಾಲೂಕಿನ ಪೆರ್ನೆಯ ಪ್ರಜ್ವಲ ಮತ್ತು ಕಿಶನ ಹಾಗೂ ಬರಿಮಾರು ಗ್ರಾಮದ ಬಲ್ಯ ನಿವಾಸಿ ಪ್ರಖ್ಯಾತ ಈ ಐವರು ಇದೀಗ ಜೈಲು ಸೇರಿದ್ದಾರೆ.
ಸಂತ್ರಸ್ತೆ ಹಾಗೂ ಇವರು ಒಂದೇ ಕಾಲೇಜಿನ ವಿದ್ಯಾರ್ಥಿಗಳು. ಮಾತ್ನಾಡುವ ನೆಪದಲ್ಲಿ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ವಿದ್ಯಾರ್ಥಿಯೊಬ್ಬ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಉಳಿದವರು ಬಂದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ನೀಚ ಕೃತ್ಯವನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡ ಪಾಪಿಗಳು. ಆಕೆಗೆ ಬೆದರಿಕೆ ಹಾಕ್ತಿದ್ರಂತೆ.
ಪಾಪಿಗಳ ಪಾಪದ ಕೊಡ ತುಂಬಿದ ಕಾರಣ, ಐವರ ನಡುವೆ ಜಗಳವಾಗಿದೆ. ಇದ್ರಿಂದಾಗಿ ಗುಂಪಿನಲ್ಲಿ ಒಡಕು ಮೂಡಿದೆ. ಆಗ ಗುಂಪಿನಲ್ಲಿದ್ದ ಒಬ್ಬ ಈ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದು ವೈರಲ್ ಆಗಿದೆ. ಪೊಲೀಸರ ಗಮನಕ್ಕೆ ಬಂದಿದೆ. ಹೀಗಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರನ್ನ ಬಂಧಿಸಿ ತನಿಖೆ ನಡೆಸ್ತಿದ್ದಾರೆ.