ಪ್ರಜಾಸ್ತ್ರ ಸುದ್ದಿ
ವಿಜಯಪುರ/ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ರಾಜ್ಯದ ದೊಡ್ಡ ಜಲಾಶಯವೆಂದೆ ಖ್ಯಾತಿ ಪಡೆದಿರುವ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ರು. ಈ ವೇಳೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ಡಿಸಿಎಂ ಗೋವಿಂದ ಕಾರಜೋಳ, ನಿರಾಣಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ ಸೇರಿ ಅನೇಕರು ಭಾಗವಹಿಸಿದ್ರು.
ನೆರೆಯಿಂದ ಹಾನಿಗೊಳಗಾದ ಬೆಳಗಾವಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿನ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದ ಸಿಎಂ, ಮಾಧ್ಯಾಹ್ನ ಬಾಗಿನ ಅರ್ಪಿಸಿದ್ರು. ಈ ವೇಳೆ ವಿಜಯಪುರ, ಬಾಗಲಕೋಟೆ, ಬೆಳಗಾವಿ ಸಚಿವರು ಸೇರಿದಂತೆ ಅನೇಕರು ಭಾಗವಹಿಸಿದ್ರು.