ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮಹಾರಾಷ್ಟ್ರ ಸೇರಿದಂತೆ ರಾಜ್ಯದಲ್ಲಿಯೂ ಭರ್ಜರಿ ಮಳೆಯಾಗ್ತಿದೆ. ಇದ್ರಿಂದಾಗಿ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಮಳೆ ಜೋರಾಗಿದ್ದು, ಆಲಮಟ್ಟಿ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರ್ತಿದೆ.
ಒಳಹರಿವು ಹೆಚ್ಚಾದ ಪರಿಣಾಮ ಶುಕ್ರವಾರ ಮಧ್ಯಾಹ್ನ 2.5 ಲಕ್ಷ ಕ್ಯೂಸೆಕ್ ನೀರನ್ನ ಹರಿಬಿಡಲಾಗಿದೆ. ಕೃಷ್ಣಾ ನದಿಗೆ ನೀರು ಹರಿಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಜಲಾಶಯದ ಕೆಳಹಂತದಲ್ಲಿರುವ ಜನರು ಎಚ್ಚರಿಕೆಯಿಂದ ತಿಳಿಸಲಾಗಿದೆ.