ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಕಾಂಗ್ರೆಸ್, ಜೆಡಿಎಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಆಮ್ ಆದ್ಮಿ ಮತ್ತೊಂದು ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಕುರಿತು ಮಾತನಾಡಿರುವ ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಾಮಾಣಿಕ ಆಯ್ಕೆ ನಡೆಸಲಾಗಿದೆ. 11 ಮಹಿಳೆಯರು, 14 ರೈತರು, ಓರ್ವ ಬಿಎಂಟಿಸಿ ಮಾಜಿ ಕಂಡಕ್ಟರ್ ಗೂ ಟಿಕೆಟ್ ನೀಡಲಾಗಿದೆ ಎಂದರು.
ಈಗಾಗ್ಲೇ 80 ಅಭ್ಯರ್ಥಿಗಳ ಪಟ್ಟು ಬಿಡುಗಡೆ ಮಾಡಿದ್ದು, ಇಂದು 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಯಿತ. ಕಾಂಗ್ರೆಸ್ ನಿಂದ ಆಪ್ ಸೇರಿ ಅಭ್ಯರ್ಥಿಯಾಗಿರುವ ಹಿರಿಯ ನಾಯಕ ಬ್ರಿಜೇಶ್ ಕಾಳಪ್ಪ, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು.