ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿಣ, ಕುಂಕುಮ ಸೇರಿದಂತೆ ಯಾವುದೇ ರೀತಿಯ ರಾಸಾಯನಿಕ ವಸ್ತುಗಳನ್ನು ಬಳಸಬಾರದೆಂದು ಸರ್ಕಾರ ಆದೇಶಿಸಿದೆ. ಇದು ಇದೀಗ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧ, ವಿಕಾಸಸೌಧ ಪಾರಂಪರಿಕ ಕಟ್ಟಡಗಳು. ರಾಸಾಯನಿಕಯುಕ್ತ ಬಣ್ಣಗಳು ಎಲ್ಲೆಡೆ ಚಲ್ಲಿದರೆ ಬಹುಕಾಲ ಉಳಿಯುತ್ತೆ. ಇದರಿಂದ ಕಟ್ಟಡಗಳಿಗೆ ಹಾನಿಯಾಗುತ್ತೆ. ಹಿಂದಿನ ಸರ್ಕಾರಗಳು ಈ ಸಂಪ್ರದಾಯ ಪಾಲಿಸಿಕೊಂಡು ಬಂದಿವೆ. ಅದನ್ನು ನಾವು ಮಾಡಿದ್ದೇವೆ. ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲು ಏನೇನೂ ಹೇಳುತ್ತಿದ್ದು, ಇದಕ್ಕೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ.