ಪ್ರಜಾಸ್ತ್ರ ಸುದ್ದಿ
ವಿಜಯಪುರ/ಅಥಣಿ: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಶಿವಪುತ್ರ ಮಹಾಸ್ವಾಮಿಗಳು (64) ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.
ಅಭಿನವ ಶಿವಪುತ್ರ ಮಹಾಸ್ವಾಮಿಗಳ ಸಮಾಧಿಕ್ರಿಯೆ ಇಂದು ಮಧ್ಯಾಹ್ನ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ಹಲವು ಶ್ರೀಗಳ ಸಮ್ಮುಖದಲ್ಲಿ ನೇರವೇರಲಿದೆ. ಶ್ರೀಗಳ ನಿಧನಕ್ಕೆ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಮಹಾಸ್ವಾಮಿಗಳು, ಹಲ್ಯಾಳ ಗುರುಸಿದ್ದೇಶ್ವರ ಮಠದ ಗುರುಸಿದ್ದ ಮಹಾಸ್ವಾಮಿಗಳು, ನದಿ ಇಂಗಳಗಾಂವದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಉಪ ಮುಖ್ಯ ಮಂತ್ರಿ ಲಕ್ಷ್ಮಣ ಸವದಿ ಮತ್ತು ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತಿತರರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ವಿಜಯಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಶುಕ್ರವಾರ ಸಂಜೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ರಾತ್ರಿ ಲಿಂಗೈಕ್ಯರಾಗಿದ್ದಾರೆ ಎಂದು ಶ್ರೀ ಮಠದ ಉತ್ತರಾಧಿಕಾರಿಗಳಾದ ಅಭಿನವ ಸಿದ್ಧಾರೂಢ ಸ್ವಾಮೀಜಿಯವರು ತಿಳಿಸಿದ್ರು.