ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ದಿಢೀರ್ ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆ ಗೃಹ ಸಚಿವರ ಮನೆಯೊಳಗೆ ನುಗ್ಗಲು ಯತ್ನಿಸಿದೆ. ಕೆಲವರು ಗೇಟ್ ಜಿಗಿದು ಒಳಗೆ ಹೋಗಿದ್ದಾರೆ. ಇದರಿಂದಾಗಿ ಅಲ್ಲಿಂದ ಏಳೆಂಟು ಜನ ಪೊಲೀಸರಿಗೆ ಕಾರ್ಯಕರ್ತರನ್ನು ಕಂಟ್ರೋಲ್ ಮಾಡುವುದು ಕಷ್ಟವಾಯಿತು.
ಇಷ್ಟೊಂದು ದೊಡ್ಡ ಮಟ್ಟದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿರುವುದು ಪೊಲೀಸ್ ಇಲಾಖೆಗೆ ಗೊತ್ತಿಲ್ಲದಿರುವುದು ಗುಪ್ತಚರ ಇಲಾಖೆಯ ದೌಡ ವೈಫಲ್ಯವೆಂದು ಹೇಳಲಾಗುತ್ತಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಘಟನೆ ಸಂಬಂಧ 40 ಜನರನ್ನು ವಶಕ್ಕೆ ಪಡೆಯಲಾಗಿದೆಯಂತೆ. ಮೊದಲು ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿ ಏಕಾಏಕಿ ಗೃಹ ಸಚಿವರ ಮನೆಯೊಳಗೆ ನುಗ್ಗಿದ್ದು, ಹೆಚ್ಚುವರಿ ಪೊಲೀಸರು ಇಲ್ಲದ ಪರಿಣಾಮ ಪೊಲೀಸರಿಗೆ ನಿಯಂತ್ರಿಸಲು ಆಗಿಲ್ಲ. ಈ ಸಂಬಂಧ ಇದೀಗ ತನಿಖೆ ನಡೆಯುತ್ತಿದೆ.