ಮಂಗಳೂರು ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

162

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಹಿರಿಯ ಸ್ವತಂತ್ರ ಹೋರಾಟಗಾರ, ಮಾಜಿ ಶಾಸಕ ಬಿ.ವಿ ಕಕ್ಕಿಲಾಯ ಅವರ ಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾಲಯದಲ್ಲಿನ ರವೀಂದ್ರ ಕಲಾಭವನದಲ್ಲಿ ಉಪನ್ಯಾಸ ಆಯೋಜಿಸಲಾಗಿತ್ತು. ದೆಹಲಿ ವಿವಿಯ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಧ್ಯಾಪಕ ಸಂಶುಲ್ ಇಸ್ಲಾಂ ಅವರು ಉಪನ್ಯಾಸ ನೀಡಿದರು. ಇದಕ್ಕೆ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.

ಕಲಾಭವನದ ಹೊರಗೆ ಪ್ರತಿಭಟನೆ ನಡೆಸಿ, ಸಂಶುಲ್ ಇಸ್ಲಾಂ ಅವರನ್ನು ಆಹ್ವಾನಿಸಿದ್ದು ಸರಿಯಲ್ಲ. ಅವರು ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಕರ್ ವಿರುದ್ಧ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857-ಹೇಳದೆ ಉಳಿದ ಅದ್ಭುತ ಕಥೆಗಳು’ ಅನ್ನೋ ಕನ್ನಡ ಅನುವಾದ ಕೃತಿ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಸಾರ್ವಕರ್ ವಿರೋಧಿ ಮಾತ್ರವಲ್ಲ. ಜಿನ್ನಾ ವಿರೋಧಿಯೂ ಹೌದು. ಇವರಿಬ್ಬರು ದೇಶ ಇಬ್ಭಾಗದ ಒಲವು ಹೊಂದ್ದಿದ್ದರು ಎಂದರು.




Leave a Reply

Your email address will not be published. Required fields are marked *

error: Content is protected !!