ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ನೀಡಿರುವ ಹೇಳಿಕೆ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನೇಹಾ ಹತ್ಯೆ ಆಕಸ್ಮಿಕ ಎಂದಿರುವ ಗೃಹ ಸಚಿವರು ತಮ್ಮ ಹೇಳಿಕೆ ಹಿಂಪಡೆದು, ಆಕೆ ಕುಟುಂಬಸ್ಥರ ಕ್ಷಮೆ ಕೇಳಬೇಕು ಎಂದರು.
ಈ ವೇಳೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್ ಗಳನ್ನು ತಳ್ಳಿ, ಮನೆಯೊಳಗೆ ನುಗ್ಗಲು ಯತ್ನಿಸಿದರು. ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು. ಇಂದು ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆಗೆ ಕರೆ ನೀಡಿದೆ. ವಶಕ್ಕೆ ಪಡೆದ ಕಾರ್ಯಕರ್ತರನ್ನು ಕೆಲ ಗಂಟೆಗಳ ಬಳಿಕ ಬಿಟ್ಟು ಕಳಿಸಿದರು.