ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರ ನೇಮಕ

615

ಬೆಂಗಳೂರು: ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ಮತ್ತು ಸದಸ್ಯರನ್ನ ರಾಜ್ಯ ಸರ್ಕಾರವನ್ನ ನೇಮಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನಿರ್ದೇಶಕ ಹಾಗೂ ನಾಟಕಕಾರ ಟಿ.ಎಸ್ ನಾಗಾಭರಣ ಅವರನ್ನ ನೇಮಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಎಂ.ಎನ್ ನಂದೀಶ ಹಂಜೆ ಅವರನ್ನ ನೇಮಿಸಲಾಗಿದೆ.

ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಬಾ.ಬಿ.ವಿ ವಸಂತಕುಮಾರ, ನಾಟಕ ಅಕಾಡೆಮಿ ಅಧ್ಯಕ್ಷರನ್ನಾಗಿ ಭೀಮಸೇನ, ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿಯ ಅಧ್ಯಕ್ಷರನ್ನಾಗಿ ಆನೂರು ಅನಂತಕೃಷ್ಣ ಶರ್ಮಾ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾಗಿ ವೀರಣ್ಣ ಅರ್ಕಸಾಲಿ, ಕರ್ನಾಟಕ ಲಲಿತಕಲಾ ಅಕಾಡೆಮಿಯ ಡಿ.ಮಹೇಂದ್ರ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಪ್ರೊ.ಎಂ.ಎ ಹೆಗ್ಡೆ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಮಂಜಮ್ಮ ಜೋಗತಿ ಅವರನ್ನ ನೇಮಿಸಲಾಗಿದೆ.

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ದಯಾನಂದ ಕತ್ತಲಸರ, ಕರ್ನಾಟಕ ಕೊಡವ ಅಕಾಡೆಮಿ ಅಧ್ಯಕ್ಷರಾಗಿ ಪಾರ್ವತಿ ಅಪ್ಪಯ್ಯ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗೆ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನ, ಸದಸ್ಯರನ್ನ ನೇಮಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!