ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಎಸಿಬಿ ಹಾಗೂ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಗರಂ ಆಗಿದ್ದರು. ಅಲ್ಲದೇ ತಮಗೆ ವರ್ಗಾವಣೆ ಬೆದರಿಕೆ ಬಂದಿದೆ ಎಂದಿದ್ದರು. ಅವರು ಮಾತನಾಡಿರುವ ವಿಡಿಯೋ ದೇಶವ್ಯಾಪಿ ವೈರಲ್ ಆಗಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಲು ಏರಿದ್ದ ಎಡಿಜಿಪಿ ಸೀಮಂತ್ ಕುಮಾರ್ ಅವರ ಅರ್ಜಿಯನ್ನು ಇನ್ನು ವಿಚಾರಣೆಗೆ ತೆಗೆದುಕೊಂಡಿಲ್ಲ.
ಇದೀಗ ಹೈಕೋರ್ಟ್ ನಲ್ಲಿ ನಡೆಯಬೇಕಿದ್ದ ವಿಚಾರಣೆಯನ್ನು ಮೂರು ದಿನಕ್ಕೆ ಮುಂದೂಡಲಾಗಿದೆ. ಬುಧವಾರ ನಡೆಯಬೇಕಿದ್ದ ವಿಚಾರಣೆ ಮುಂದೂಡಲಾಗಿದ್ದು, ಎಡಿಜಿಪಿ ಸೀಮಂತ್ ಕುಮಾರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.