ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಬೆಳ್ಳಂಬೆಳಗ್ಗೆ ನಗರದ ಅಸಿಸ್ಟೆಂಟ್ ಇಂಜಿನಿಯರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ ತೋಪಲಕಟ್ಟಿ ಎಂಬುವರ ಮನೆ ಮೇಲೆ, ಕಚೇರಿ ಹಾಗೂ ಗ್ಯಾಸ್ ಏಜೆನ್ಸಿ ಮೇಲೆ ಎಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ವಿದ್ಯಾಗಿರಿಯ 8ನೇ ಕ್ರಾಸ್ ನಲ್ಲಿರುವ ಮನೆ, 17ನೇ ಕ್ರಾಸ್ ನಲ್ಲಿರುವ ಗ್ಯಾಸ್ ಏಜೆನ್ಸಿ ಹಾಗೂ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ 20 ಮಂದಿಯ ತಂಡ ಪರಿಶೀಲನೆ ನಡೆಸ್ತಿದೆ.