ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಆಗಾಗ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಲೇ ಇರುತ್ತವೆ. ಹೀಗಾಗಿ ಎಸಿಬಿ ದಾಳಿ ನಡೆಯುತ್ತಲೇ ಇರುತ್ತದೆ. ಇತ್ತೀಚೆಗೆ ಮತ್ತೆ ಬಿಬಿಎಂಪಿ ಮೇಲೆ ಎಸಿಬಿ ದಾಳಿ ನಡೆಸಿದೆ.
ಎಸಿಬಿ ದಾಳಿ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಯಾವೆಲ್ಲ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆಯೋ ಆ ಎಲ್ಲ ಕಚೇರಿಗಳ ಭೇಟಿಗೆ ಸಾರ್ವಜನಿಕರನ್ನು ದಾಳಿ ಮುಕ್ತಾಯದವರೆಗೂ ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.