ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭ್ರಷ್ಟಾಚಾರದ ಆರೋಪದಡಿಯಲ್ಲಿ ಕೆಎಎಸ್ ಅಧಿಕಾರಿ ಡಾ.ಸುಧಾ ಎಂಬುವರ ಮನೆ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಆಡಳಿತ ಅಧಿಕಾರಿಯಾಗಿರುವ ಡಾ.ಬಿ ಸುಧಾ ಬೆಂಗಳೂರಿನ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆಸಲಾಗಿದೆ.
ನಗರದ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿನ ಫ್ಲಾಟ್, ಬ್ಯಾಟರಾಯನಪುರ ಮತ್ತು ಬಿಇಎಂಎಲ್ ಮನೆ ಹಾಗೂ ಉಡುಪಿಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿಂದೆ ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ಪತಿ ಹಾಗೂ ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ರಂತೆ.
ಇವರ ಆದಾಯಕ್ಕಿಂತ ಆಸ್ತಿ ಹೆಚ್ಚಾಗಿರುವುದು ಕಂಡು ಬಂದಿದೆ.ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ರು. ಹೀಗಾಗಿ ಎಸಿಬಿ ಅಧಿಕಾರಿಗಳು ಶನಿವಾರ ಬೆಳಗ್ಗೆ ಡಾ.ಬಿ ಸುಧಾ ಮನೆ ಮೇಲೆ ದಾಳಿ ಮಾಡಿದ್ದಾರೆ.