ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಮಂಗಳವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ದಾಖಲೆ ಸಮೇತ ದಾಳಿ ನಡೆಸಿದ್ದಾರೆ ಎಂದಿದ್ದಾರೆ.
ಎಸಿಬಿ ದಾಳಿ ನಿರಂತರವಾಗಿ ನಡೆಯುತ್ತಿರುತ್ತದೆ. ಇದಕ್ಕೆ ರಾಜಕೀಯ ಬಣ್ಣ ಬಳೆಯೋದು ಸಾಮಾನ್ಯ. ದಾಖಲೆ ಆಧಾರದ ಮೇಲೆ ಎಸಿಬಿ ದಾಳಿ ನಡೆದಿರುತ್ತೆ. ಬಿಜೆಪಿ ದಾಳಿ ಆರೋಪ ಮಾಡುವುದು ಕಾಂಗ್ರೆಸ್ ಸ್ಲೋಗನ್ ಆಗಿದೆ ಎಂದರು.