ಎಸಿಬಿ ಬಲೆಗೆ ತಹಶೀಲ್ದಾರ್ ಕಚೇರಿ ಅಧಿಕಾರಿ

421

ವಿಜಯಪುರ: ಐದು ಸಾವಿರ ರೂಪಾಯಿ ಲಂಚ ಕೇಳಿದ ಪ್ರಕರಣದಲ್ಲಿ ವಿಜಯಪುರ ತಹಶೀಲ್ದಾರ್ ಕಚೇರಿಯ ಎಫ್ ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ವಿಜಯಪುರದ ಹೊಸ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ದಾಳಿ ವೇಳೆ ಎಫ್ ಡಿಎ ಅಧಿಕಾರಿ ಮಹ್ಮದ್ ರಫಿಕ್ ಗೋಳಸಂಗಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಒಂದು ಗುಂಟೆ ಜಮೀನನ್ನ ಅಳತೆ ಮಾಡಿಕೊಡಲು ಅಹ್ಮದ್ ಅತ್ತಾರ ಎಂಬುವರು ಕೇಳಿಕೊಂಡಿದ್ದಾರೆ. ಇದಕ್ಕೆ ಮಹ್ಮದ್ ರಫಿಕ್ 5 ಸಾವಿರ ರೂಪಾಯಿ ಲಂಚ ಕೇಳಿದ್ದಾರೆ. ಹೀಗಾಗಿ ಅಹ್ಮದ್ ಎಸಿಬಿ ದೂರು ನೀಡಿದ್ರು. ಇಂದು ಕಚೇರಿಯಲ್ಲಿ ಹಣ ಸ್ವೀಕರಿಸುವ ವೇಳೆ ಎಸಿಬಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿ ದಾಳಿ ನಡೆಸಿದಾಗ, ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


TAG


Leave a Reply

Your email address will not be published. Required fields are marked *

error: Content is protected !!