ಬೆಳ್ಳಂಬೆಳಗ್ಗೆ ಭೀಕರ ಅಪಘಾತ

190

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಬರೋಬ್ಬರಿ 12 ಜನರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.

ಚಿತ್ರಾವತಿ ಎಂಬಲ್ಲಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮಕ್ಕಳು ಸೇರಿದಂತೆ 12 ಜನರು ಮೃತಪಟ್ಟಿದ್ದಾರೆ. ಮೂವರು ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲ ಆಂಧ್ರಪ್ರದೇಶದವರೆಂದು ತಿಳಿದು ಬಂದಿದೆ. ಅವರು ಗುರುತು ಪತ್ತೆಯಾಗಬೇಕಿದೆ. ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದಾರೆ. ಮಂಜು ಮುಸುಕಿದ್ದರಿಂದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ತನಿಖೆ ಬಳಿಕ ತಿಳಿಯಲಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!