ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಭೀಕರ ಅಪಘಾತ: ಮೂವರ ಸಾವು

245

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪದೆಪದೆ ಅಪಘಾತವಾಗುತ್ತಿದ್ದ ಸಾವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಗುರುವಾರ ಬೆಳಗಿನ ಜಾವ ಸುಮಾರು 5 ಗಂಟೆಯ ಸಮಯದಲ್ಲಿ ಲಾರಿ ಹಾಗೂ ಆಂಬ್ಯುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಅತ್ತಿಬೇಲಿ ಹತ್ತಿರದ ನೆರಳೂರು ಬಳಿ ಹೊಸರು ಕಡೆ ಹೊರಟಿದ್ದ ಲಾರಿಗೆ ಮಹಾರಾಷ್ಟ್ರ ಮೂಲದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!