ನವಲಗುಂದ: ಕ್ರುಷರ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಗಂಗಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಹನಸಿ ಗ್ರಾಮದ 26 ವರ್ಷದ ಮಹಾಂತೇಶ ನಿಂಗಪ್ಪ ಗುಜ್ಜಳ, 28 ವರ್ಷದ ಚಂದ್ರಗೌಡ ಶಿವನಗೌಡ ರಾಯನಗೌಡ ಹಾಗೂ ಹೆಬ್ಬಾಳ ಗ್ರಾಮದ 26 ವರ್ಷದ ಆನಂದ ನಿಂಗಪ್ಪ ಜೆಟ್ಟೆನವರ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಮೃತದೇಹಗಳನ್ನ ನವಲಗುಂದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಶವಪರೀಕ್ಷೆ ನಡೆಸಲಾಗುತ್ತಿದೆ. ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.