ಪ್ರಜಾಸ್ತ್ರ ಸುದ್ದಿ
ತುಮಕೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಹತ್ತಿರ ಈ ದುರ್ಘಟನೆ ನಡೆದಿದೆ. ಟೆಂಪೋ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜನರು ಬೆಂಗಳೂರಿಗೆ ದುಡಿಯಲು ಹೊರಟಿದ್ದರು. ಟೆಂಪೋದಲ್ಲಿ ಸುಮಾರು 30 ಜನರಿದ್ದರಂತೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 14 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.