ಬೆಳಗಾವಿ: ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಪಂಢಾರಾಪುರಕ್ಕೆ ಹೊರಟಿದ್ದ ಬುಲೆರೋ ಟೆಂಪೋ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ಸುಮಾರು 4 ಗಂಟೆಯ ಟೈಂನಲ್ಲಿ ಮಹಾರಾಷ್ಟ್ರದ ಸಾಂಗೋಲ್ಯಾ ಬಳಿ ದುರ್ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಐವರು ಮೃತಪಟ್ಟಿದ್ದು ಏಳು ಜನರಿಗೆ ಗಾಯಗಳಾಗಿವೆ. ಮೃತರ ಹೆಸರು ಇನ್ನು ಪತ್ತೆಯಾಗಿಲ್ಲ.
ಬುಲೆರೋ ಟಿಂಪೋದಲ್ಲಿ ಮಂಡೋಳಿಯಿಂದ ಗುರುವಾರ ರಾತ್ರಿ ಪಂಢಾರಪುರದ ವಿಠ್ಠಲನ ದರ್ಶನಕ್ಕೆ ಹೊರಟಿದ್ದಾರೆ. ಸಾಂಗೋಲ್ಯಾದಿಂದ 10 ಕಿಲೋ ಮೀಟರ್ ದೂರದಲ್ಲಿ, ಇಟ್ಟಿಗೆ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬರ್ತಿದ್ದ ಬುಲೆರೋ ಟೆಂಪೋ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದೆ.