ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಹೆಡ್ ಕಾನ್ಸ್ ಟೇಬಲ್ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಲಡ್ಲಾಪುರ ಕ್ರಾಸ್ ಹತ್ತಿರ ನಡೆದಿದೆ. ವಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಕರಿಯಪ್ಪ ಪೂಜಾರಿ ಪೂಜಾರಿ(35) ಮೃತ ದುರ್ದೈವಿ.
ಯಾದಗಿರಿ ಮಾರ್ಗದ ನಾಲವಾರ ಚೆಕ್ ಪೋಸ್ಟ್ ನಲ್ಲಿ ಕೆಲಸ ನಿರ್ವಹಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಳೆದ ರಾತ್ರಿ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಡಿಗ್ಗಿ ತಾಂಡಾ ಹತ್ತಿರದ ಕೂಡುರಸ್ತೆಯ ಹತ್ತಿರ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬಸ್ಥರು ಬಂದ ಬಳಿಕ ಪಂಚನಾಮೆ ಮಾಡಲಾಗಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.