ಭೀಕರ ರಸ್ತೆ ಅಪಘಾತಕ್ಕೆ ಐವರು ವಿದ್ಯಾರ್ಥಿಗಳ ಸಾವು

344

ಕೊಯಮತ್ತೂರು: ಕರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ನೀಡಲಾಗಿತ್ತು. ಹೀಗಾಗಿ ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗಿದ್ರು. ಈ ಹೊತ್ತಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆ ತಮಿಳುನಾಡಿನ ತಿರುಪೂರ ಜಿಲ್ಲೆಯಲ್ಲಿ ನಡೆದಿದೆ.

ಆವಂಶಿ ಪ್ರದೇಶದಲ್ಲಿ 7 ಜನ ವಿದ್ಯಾರ್ಥಿಗಳಿದ್ದ ಕಾರು ಸಿಮೆಂಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇವರ ಸ್ಥಿತಿ ಗಂಭೀರವಾಗಿದೆ. ಇವರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊಯಮತ್ತೂರು ಪೊಲೀಸ್ರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!