ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಮೂರು ಸಾವು

357

ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದ ಭೀಕರ ಅಫಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೆ ಎಸ್ಆರ್ ಟಿಸಿ ಚಾಲಕ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಲಾರಿ ಹಾಗೂ ಕೆ ಎಸ್ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತಿವೇಗ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಅಂತಾ ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!