ವಿಜಯಪುರ: ಸಿಂದಗಿ ತಾಲೂಕಿನ ಹೊನ್ನಳ್ಳಿ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಿಂದಗಿ ತಾಲೂಕಿನ ಗಬಸಾವಳಿ ಗ್ರಾಮದ ರಾಮನಗೌಡ ಪಾಟೀಲ್ ಹಾಗೂ ಶಾಂತಗೌಡ ಮಾಲಿಪಾಟೀಲ್ ಮೃತ ದುರ್ದೈವಿಗಳು. ಇನ್ನೋರ್ವ ಸುರುಪುರ ತಾಲೂಕಿನ ವಂದಗನೂರು ಗ್ರಾಮದವನು ಎಂದು ತಿಳಿದು ಬಂದಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.