ಕೊಲ್ಹಾರ ಬಳಿ ಅಪಘಾತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ!

472

ವಿಜಯಪುರ: ಜಿಲ್ಲೆಯ ಕೊಲ್ಹಾರ ಬಳಿ ಟಂಟಂ ಹಾಗೂ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎನ್ನಲಾಗ್ತಿದೆ. ಇದ್ರಿಂದಾಗಿ ರೊಚ್ಚಿಗೆದ್ದ ಸ್ಥಳೀಯರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ವೇಳೆ ಪಿಎಸ್ಐ ಒಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಹೆಸರು ತಿಳಿದು ಬಂದಿಲ್ಲ. ಸ್ಥಳದಲ್ಲಿ ಗಲಾಟೆ ನಡೆಸಿದವರು ಪರಾರಿಯಾಗಿದ್ದು ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಟೀಂ ಬಂದಿದೆ. ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪಕ್ಕೆ ಹೋಗದಂತೆ ನಿಗಾ ವಹಿಸಿದ್ದಾರೆ.

ಕೊಲ್ಹಾರ ಬಳಿ ಪೊಲೀಸ್ರು ವಾಹನಗಳ ದಾಖಲೆ ಪರಿಶೀಲನೆ ಮಾಡ್ತಿದ್ದಾಗ, ಈ ವೇಳೆ ಇದೆ ಮಾರ್ಗದಲ್ಲಿ ಟಂಟಂ ವಾಹನ ಬಂದಿದೆ. ಆಗ ಪೊಲೀಸ್ರಿಂದ ತಪ್ಪಿಸಿಕೊಳ್ಳಲು ಹೋದ ಟಂಟಂ ವಾಹನ ಚಾಲಕ ಎದುರಿಗೆ ಬರ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ. ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ವಿಷ್ಯ ತಿಳಿದತ್ತು. ಇದೀಗ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!