ಬ್ರೇಕಿಂಗ್ ನ್ಯೂಸ್
Search

ಪರೀಕ್ಷೆ ಮುಗಿಸಿ ಹೊರಟ್ಟಿದ್ದ ವಿದ್ಯಾರ್ಥಿಗಳ ಬೈಕ್ ಗೆ ಲಾರಿ ಡಿಕ್ಕಿ

418

ಪ್ರಜಾಸ್ತ್ರ ಸುದ್ದಿ

ಗದಗ: ಇಂದು ನಡೆದ ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ ಊರಿಗೆ ಹೊರಟಿದ್ದ ವಿದ್ಯಾರ್ಥಿಗಳ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

ಈರಣ್ಣ ಬಡಿಗೇರ, ಸಿದ್ದಪ್ಪ ತಳವಾರ ಹಾಗೂ ಮೈಲಾರಿ ಯಳವತ್ತಿ ಅನ್ನೋ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡರಗಿ ಮಾರ್ಗವಾಗಿ ಬರ್ತಿದ್ದ ಲಾರಿ ಹಾಗೂ ಟಿಪ್ಪರ್ ನಡುವೆ ಓವರ್ ಟೇಕ್ ನಡೆದ ಪರಿಣಾಮ ಈ ಘಟನೆ ಸಂಭವಿಸಿದೆಯಂತೆ.

ಇನ್ನು ಲಾರಿ ರಸ್ತೆ ಪಕ್ಕ ನಿಂತಿದ್ದ ಮತ್ತೊಂದು ಗಾಡಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!