ಶಹಾಪೂರ, ಯಾದಗಿರಿ: ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಹತ್ತಿಗೂಡುರು ಗ್ರಾಮದ ರಾಜ್ಯ ಹೆದ್ದಾರಿ ಬಳಿ ಈ ಒಂದು ಘಟನೆ ನಡೆದಿದೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರ 52 ವರ್ಷದ ಮಡಿವಾಳಪ್ಪ ಅಗಸರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕನ್ಯಾಕೂಳೂರು ಗ್ರಾಮದ ನಿವಾಸಿಯಾದ ಮಡಿವಾಳಪ್ಪ, ನಂದಿಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಈ ಒಂದು ಘಟನೆ ನಡೆದಿದೆ.
ಬೈಕ್ ಅನ್ನು ಓವರ್ ಟೇಕ್ ಮಾಡಲು ಹೋದ ಟಿಪ್ಪರ್ ಚಾಲಕ, ಗಾಡಿಯನ್ನ ಲೆಫ್ಟ್ ಗೆ ತಿರುಗಿಸಿದ್ದಾನೆ. ಆಗ ಬೈಕ್ ಸವಾರ ಟಿಪ್ಪರ್ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.