ಮೈಸೂರು: ಟಿ ನರಸೀಪುರ ತಾಲೂಕಿನ ವ್ಯಾಸರಾಜಪುರದ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ವೇಳೆ ಆರ್.ಟಿ.ಒ ಇನ್ಸ್ ಪೆಕ್ಟರ್ ಮೃತಪಟ್ಟಿದ್ದಾರೆ.
50 ವರ್ಷದ ಆರ್.ಟಿ.ಒ ಇನ್ಸ್ ಪೆಕ್ಟರ್ ಅಬ್ದುಲ್ ನಜೀಮ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಪಘಾತದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.