ಪ್ರಜಾಸ್ತ್ರ ಅಪರಾಧ ಸುದ್ದಿ
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ಎರಿಚಿದ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಎರಡನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಲಯ ಈ ಶಿಕ್ಷೆ ನೀಡಿದೆ.
ಗಣೇಶ, ವಿನೋದ, ಮಹಮ್ಮದ ಕಬೀರ ಹಾಗೂ ಅಬ್ದುಲ ಮಜೀದಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ತಲಾ 5 ಲಕ್ಷ ದಂಡ ವಿಧಿಸಲಾಗಿದೆ. ಏಪ್ರಿಲ್ 18, 2015ರಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಯುವತಿ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದ್ರಿಂದ ಸಂತ್ರಸ್ತೆಯ ಎಡಗಣ್ಣಿಗೆ ಹಾನಿಯಾಗಿತ್ತು. ಅಲ್ದೇ ಮೈಕೈ ಸುಟ್ಟಿತ್ತು.
ಅಪರಾಧಿ ಗಣೇಶ, ಯುವತಿಗೆ ಮದುವೆಯಾಗು ಎಂದು ಪೀಡಿಸುತ್ತಿದ್ದ. ಅದಕ್ಕೆ ಯುವತಿ ನಿರಾಕರಿಸಿದ್ದಳು. ಹೀಗಾಗಿ ಈ ಕೃತ್ಯವೆಸಗಿದ್ದ. ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.