ಆ್ಯಸಿಡ್ ದಾಳಿ ಪ್ರಕರಣ: ಮಹಿಳಾ ಆಯೋಗ ಭೇಟಿ

94

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಕಡಕ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಇಂದು ಭೇಟಿಯಾಗಿ ಸಾಂತ್ವಾನ ಹೇಳಿದರು.

ಎ.ಜೆ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿನಿಗೆ ಶೇ.20ರಷ್ಟು, ಮತ್ತೊಬ್ಬ ವಿದ್ಯಾರ್ಥಿನಿಗೆ ಶೇ.12ರಷ್ಟು, ಇನ್ನೋರ್ವ ವಿದ್ಯಾರ್ಥಿನಿಗೆ ಶೇ.10ರಷ್ಟು ಸುಟ್ಟು ಗಾಯಗಳಾಗಿವೆ. ಇವುಗಳ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತರ ಚಿಕಿತ್ಸೆಗಾಗಿ ತಕ್ಷಣವೇ ತಲಾ 4 ಲಕ್ಷ ರೂಪಾಯಿ ಸರ್ಕಾರ ಬಿಡುಗಡೆ ಮಾಡಲಿದೆ. ಈ ಕುರಿತು ಅಧಿಕಾರಿಗಳ ಜೊತೆಗೆ ಮಾತನಾಡುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!