ಪ್ರಜಾಸ್ತ್ರ ಸುದ್ದಿ
ಹಾಸನ: ಭಾನುವಾರ ಬೆಳಗ್ಗೆ ಆಸಿಡ್ ಕೆಮಿಕಲ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ನಡೆದಿದೆ. ಆಸಿಡ್ ಕೆಮಿಕಲ್ ಲಾರಿ ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಒಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೃತರನ್ನ ಪರಮೇಶ, ಪ್ರಮೋದ ಹಾಗೂ ಪುಟ್ಟರಾಜು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಕಲಗೂಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.