ಓಮಿಕ್ರಾನ್ ನಿಯಂತ್ರಣ: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಜವಾಬ್ದಾರಿ

464

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ರೂಪಾಂತರ ತಳಿ ಓಮಿಕ್ರಾನ್ ಸೋಂಕು ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಿದೆ.

ಏರ್‌ಪೋರ್ಟ್‌ ಕೋವಿಡ್‌ ಉಸ್ತುವಾರಿ ಸಿ.ಶಿಖಾ ಅವರಿಗೆ ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗೆ ನೇಮಿಸಲಾಗಿದೆ. ಬೆಂಗಳೂರು ಪೂರ್ವ ವಲಯಕ್ಕೆ-1ಕ್ಕೆ ಕ್ಯಾಪ್ಟನ್ ಮಣಿವಣ್ಣನ್‌ ಮತ್ತು ಅಲೋಕ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ಪೂರ್ವ ವಲಯ-2ಕ್ಕೆ ಮೊಹಮ್ಮದ್‌ ಮೊಹಿಸಿನ್‌ ಮತ್ತು ಹರಿಶೇಖರನ್‌ ನೇಮಕ ಮಾಡಲಾಗಿದೆ. ಪಶ್ಚಿಮ ವಲಯಕ್ಕೆ ಎಂ.ಟಿ.ರೇಜು ಮತ್ತು ಕೆ.ಟಿ ಬಾಲಕೃಷ್ಣ ಅವರನ್ನು ನೇಮಿಸಲಾಗಿದೆ. ನೇಮಕ ಮಾಡಲಾಗಿದೆ. ಮಹದೇವಪುರಕ್ಕೆ ಉಮಾ ಮಹದೇವನ್‌, ಹಿತೇಂದ್ರ ಅವರಿಗೆ ಉಸ್ತುವಾರಿ ವಹಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!