ನಟ ಚೇತನ್ ಬಂಧನ: ವ್ಯಾಪಕ ಆಕ್ರೋಶ

181

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಟ್ವೀಟರ್ ನಲ್ಲಿ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಬರಹ ಬರೆದಿದ್ದಾರೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಮಂಗಳವಾರ ಮುಂಜಾನೆ ಬಂಧಿಸಲಾಗಿದೆ. ಇದಕ್ಕೆ ಎಲ್ಲಡೆಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಕಟುವಾಗಿ ಖಂಡಿಸಲಾಗುತ್ತಿದೆ.

ಪದೆಪದೆ ಕೋಮುವಾದದ ಹೇಳಿಕೆ ನೀಡುವ ಕೆ.ಎಸ್ ಈಶ್ವರಪ್ಪ, ಸಿ.ಟಿ ರವಿ, ಅಶ್ವತ್ಥನಾರಾಯಣ ಸೇರಿದಂತೆ ಕೋಟಿ ಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಸರ್ಕಾರ ಮುಂದಾಗುವುದಿಲ್ಲ. ಆದರೆ, ಟ್ವೀಟರ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದರು ಎಂದು ನಟ ಚೇತನ್ ಬಂಧಿಸುವ ಸರ್ಕಾರದ ಹಿಂದಿನ ಕುತಂತ್ರ ಏನು ಅನ್ನೋದು ತಿಳಿಯುತ್ತೆ ಎಂದು ವಾಗ್ದಾಳಿ ನಡೆಸಲಾಗುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟರ್

ನಟ ಚೇತನಗೆ ಯಾವುದೇ ರೀತಿಯಿಂದ ನೋಟಿಸ್ ನೀಡದೆ. ಅವರ ಮನೆಗೆ ಹೋಗಿ ನೇರವಾಗಿ ಬಂಧಿಸಲಾಗಿದೆ. ಈ ಮೂಲಕ ಕೋರ್ಟ್ ಆದೇಶವನ್ನು ಸಹ ಉಲ್ಲಂಘಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಪ್ರತಿಭಟಿಸುವ, ಸೈದ್ಧಾಂತಿಕವಾಗಿ ವಿರೋಧಿಸುವವರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಕಿಡಿ ಕಾರಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!