ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ನೀಡಿದ ಬ್ರಾಹ್ಮಣರ ಕುರಿತಾದ ಹೇಳಿಕೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ. ನಮಗೆ ಬ್ರಾಹ್ಮಣರು ಸಮಸ್ಯಯಲ್ಲ. ಬ್ರಾಹ್ಮಣ್ಯವೂ ದೊಡ್ಡ ಸಮಸ್ಯೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಮುದಾಯದಿಂದ ಬಂದವರು. ಬಿಜೆಪಿ ಅಧಿಕಾರಕ್ಕೆ ಬಂದರೆ ಶೃಂಗೇರಿ ಮಠ ಒಡೆದಿರುವ ಮಹಾರಾಷ್ಟ್ರದ ಪೇಶ್ವಿ ವಂಶಸ್ಥರಿಗೆ ಸೇರಿದ ಪ್ರಹ್ಲಾದ್ ಜೋಶಿ ಅವರನ್ನು ಸಿಎಂ ಮಾಡಿ 8 ಜನರನ್ನು ಡಿಸಿಎಂ ಮಾಡಲು ಹೊರಟಿದ್ದಾರೆ ಅನ್ನೋದು ನನಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಹಲವು ರೀತಿಯ ಮಿಶ್ರ ಪ್ರತಿಕ್ರಿಯೆಗಳು ಬರುತ್ತಿವೆ. ಇದಕ್ಕೆ ಹಲವು ರೀತಿಯ ಮಿಶ್ರ ಪ್ರತಿಕ್ರಿಯೆಗಳು ಬರುತ್ತಿವೆ.