ನಟ ಚೇತನ್ ವಿರುದ್ಧ ಕ್ರಮಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧಾರ

196

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ಚೇತನ್ ಪದೆಪದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಚಿತ್ರರಂಗಕ್ಕೆ ಮುಜುಗರವನ್ನು ಉಂಟುಮಾಡುತ್ತಿದ್ದಾರೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ ಹರೀಶ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿವಂಗತ ಅಂಬರೀಶ್ ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ನೀಡಿದ ಹೇಳಿಕೆ ಸಂಬಂಧ ಕಿಡಿ ಕಾರಿದರು. ನಟ ಅಂಬರೀಶ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ರಸ್ತೆ ಎಂದು ಹೆಸರಿಟ್ಟಿದ್ದಾರೆ. ಆದರೆ, ಚೇತನ್ ಪದೆಪದೆ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಈ ಕುರಿತು ಅವರಿಗೆ ಈಗಾಗ್ಲೇ ಅವರಿಗೆ ತಿಳಿ ಹೇಳಲಾಗಿದೆ. ಅವರ ನಡೆಯನ್ನು ತಿದ್ದಿಕೊಳ್ಳದೆ ಹೋದರೆ ಅಸಹಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!