ನಟ ಚೇತನ ವಿರುದ್ಧ ದೂರು: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷನ ವಿರುದ್ಧ ಪ್ರತಿದೂರು

238

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ ವಿರುದ್ಧ ದೂರು ನೀಡಿರುವ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್ ಸಚ್ಚಿದಾನಂದ ಸರ್ಕಾರದ ಲೋಗೋ, ಹೆಸರು, ಮುದ್ರೆಯನ್ನ ದುರ್ಬಳಕೆ ಮಾಡಿಕೊಂಡು ಕ್ರಿಮಿನಲ್ ಅಪರಾಧ ಎಸಗಿದ್ದಾರೆ ಎಂದು ದೂರು ನೀಡಲಾಗಿದೆ.

ಮಹಿಳಾ ಹೋರಾಟಗಾರ್ತಿ, ರಂಗಕರ್ಮಿ ಕಾವ್ಯ ಅಚ್ಯುತ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಇರುವುದು, ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ಮೀಸಲಾಗಿರುವ ಸರ್ಕಾರಿ ಸಂಸ್ಥೆ. ಸರ್ಕಾರದಿಂದ ನೆರವು ಕೊಡುವ ಕೆಲಸ, ಯೋಜನೆಗಳನ್ನ ರೂಪಿಸುವುದು ಹಾಗೂ ಜಾರಿ ಮಾಡುವುದಷ್ಟೇ ಅದರ ಕೆಲಸ. ಆದ್ರೆ, ಅಧ್ಯಕ್ಷರು ಸರ್ಕಾರದ ಲಾಂಛನ, ಮುದ್ರೆ, ಹೆಸರು ದುರ್ಬಳಕೆ ಮಾಡಿಕೊಂಡು, ನಟ ಚೇತನ ವಿರುದ್ಧ ಬ್ರಾಹ್ಮಣರನ್ನ ಎತ್ತಿಕಟ್ಟುವ, ಅಶಾಂತಿ ಸೃಷ್ಟಿಸುವ ಕೆಲಸ ಮಾಡ್ತಿದ್ದು, ಅವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ದೂರು ನೀಡಿದ್ದಾರೆ.

ಇನ್ನು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿಯೂ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಅನೇಕರು ನಟ ಚೇತನಗೆ ಬೆಂಬಲ ವ್ಯಕ್ತಪಡಿಸಿ ಫೇಸ್ ಬುಕ್, ಟ್ವಿಟ್ಟರ್, ವಾಟ್ಸಪ್ ಗಳಲ್ಲಿ ಅಭಿಪ್ರಾಯಗಳನ್ನ ಹಂಚಿಕೊಳ್ಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!